ಪರೇಶ್ ಮೇಸ್ತಾನ ಸಹಜ ಸಾವನ್ನು ಕೊಲೆ ಎಂದು ಬಿಂಬಿಸಿದ್ದ ಸಂಸದ, ಶಾಸಕರು ರಾಜಿನಾಮೆ ನೀಡಲಿ-ಐವಾನ್ ಡಿ’ಸೋಜಾ
ಪರೇಶ್ ಮೇಸ್ತಾನ ಸಹಜ ಸಾವನ್ನು ಕೊಲೆ ಎಂದು ಬಿಂಬಿಸಿದ್ದ ಸಂಸದ, ಶಾಸಕರು ರಾಜಿನಾಮೆ ನೀಡಲಿ-ಐವಾನ್ ಡಿ’ಸೋಜಾ ಭಟ್ಕಳದ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಮಂಗಳವಾರ ಜರಗಿದ ಪತ್ರಿಕಾಗೋಷ್ಟಿಯಲ್ಲಿ ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಐವಾನ್ ಡಿಸೋಜ ಮಾತನಾಡಿದರು. ಭಟ್ಕಳ : ಹೊನ್ನಾವರದ ಪರೇಶ ಮೇಸ್ತಾ ಅವರ ಸಹಜ ಸಾವಿನ ಪ್ರಕರಣವನ್ನು ಕೊಲೆ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆದು ಚುನಾವಣೆಯಲ್ಲಿ ಆರಿಸಿ ಬಂದಿದ್ದ ಬಿ.ಜೆ.ಪಿ. ಶಾಸಕರು, ಸಂಸದರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಐವಾನ್ ಡಿಸೋಜ ಅವರು ಆಗ್ರಹಿಸಿದರು. ಭಟ್ಕಳದ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಣೆಯಾಗಿದ್ದ ಪರೇಶ ಮೇಸ್ತ ಎರಡು ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದನ್ನೇ ಚುನಾವಣಾ ಬಂಡವಾಳವನ್ನಾಗಿಸಿಕೊAಡ ಬಿ.ಜೆ.ಪಿ. ಐವರು ಮುಸ್ಲೀಮರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸುತ್ತದೆ. ಅಂದಿನ ಮುಖ್ಯ ಮಂತ್ರಿ ಸಿ.ಓ.ಡಿ.ಗೆ ಪ್ರಕರಣ ಹಸ್ತಾಂತರ ಮಾಡಿದ್ದನ್ನು ವಿರೋಧಿಸಿ ನಮಗೆ ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ, ನಾವೇನಿದ್ದರೂ ಸಿ.ಬಿ.ಐ. ಮೇಲೆ ನಂಬಿಕೆ ಇದ್ದವರು ಸಿ.ಬಿ.ಐ. ತನಿಖೆಯೇ ಆಗಬೇಕು ಎಂದು ಆಗ್ರಹಿಸಿ ಸಿ.ಬಿ.ಐ. ತನಿಖೆಗೆ ಒಪ್ಪಿಸಲಾಗಿತ್ತು. ಆದರೆ ಇಂದು ಸಿ.ಬಿ.ಐ. ಇವರ ಪರವಾಗಿ ವರದಿಕೊಡಲಿಲ್ಲ ಎನ್ನುವ ಕಾರಣಕ್ಕೆ ಸಿ.ಬಿ.ಐ. ತನಿಖೆಯ ಮೇಲೆಯೇ ನಂಬಿಕೆ ಇಲ್ಲ ಎನ್ನುವ ಬಿ.ಜೆ.ಪಿ. ಬಣ್ಣ ಬಟಬಯಲ