ಹೇಳಿರಿ ಅಲ್ಲಾಹನು ಏಕೈಕನು ಅವನಿಗೆ ಸರಿಸಮಾರು ಯಾರು ಇಲ್ಲ. ಅವನಿಗೆ ನಿದ್ದೆಯಾಗಲಿ ತೂಕಡಿಕೆಯಾಗಲಿ ಬಾಧಿಸುವುದಿಲ್ಲ.
ಪೋಸ್ಟ್ಗಳು
ಮಾರ್ಚ್, 2010 ರಿಂದ ಪೋಸ್ಟ್ಗಳನ್ನು ತೋರಿಸುತ್ತಿದೆ
ಭಟ್ಕಳ:ವಿದ್ಯಾರ್ಥಿಗಳಿಗೆ ತಲೆಬಿಸಿಯಾದ ವಿದ್ಯುತ್ ಕಡಿತ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ.
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಭಟ್ಕಳ:ವಿದ್ಯಾರ್ಥಿಗಳಿಗೆ ತಲೆಬಿಸಿಯಾದ ವಿದ್ಯುತ್ ಕಡಿತ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ . ಭಟ್ಕಳ:೨೯, ಭಟ್ಕಳದಲ್ಲಿ ವಿದ್ಯುತ್ ಕಣ್ಣು ಮುಚ್ಚಾಲೆಗೆ ಬೇಸತ್ತ ವಿದ್ಯಾರ್ಥಿ ಸಂಘಟನೆಗೆ ಎಸ್.ಐ.ಓ ಭಟ್ಕಳ ತಾಲೂಕಿನಾದ್ಯಂತ ಪರೀಕ್ಷೆಗಳು ಮುಗಿಯುವವರೆಗೂ ವಿದ್ಯುತ್ ಕಡಿತಗೊಳಿಸದಿರುವಂತೆ ಇಲ್ಲಿನ ಸಹಾಯಕ ಕಮಿಷನರ್ ಹಾಗೂ ಹೆಸ್ಕಾಮ್ ಆಧಿಕಾರಿಗಳಿಗೆ ಮನವಿ ಅರ್ಪಿಸಿದ ಬೆನ್ನ ಹಿಂದೆಯೆ ಹೆಸ್ಕಾಂ ಕಂಪನಿಯು ವಿದ್ಯುತ್ ಕಡಿತವನ್ನು ದ್ವಿಗುಣಗೊಳಿಸಿದ್ದು ಪರೀಕ್ಷೆಯ ಸಮಯದಲ್ಲಿ ಈ ವಿದ್ಯುತ್ ಕಡಿತವು ವಿದ್ಯಾರ್ಥಿಗಳಿಗೆ ಭಾರಿ ಬೆಲೆಯನ್ನು ತೆರುವಂತೆ ಮಾಡಿದೆ. ಸಂಜೆ ಹಾಗೂ ಬೆಳಗಿನ ಸಮಯ ಅರ್ದಗಂಟೆ ವಿದ್ಯುತ್ ಕಡಿತಗೊಳಿಸುತ್ತಿರುವ ಇಲಾಖೆಯು ಈಗ ಅದನ್ನು ದ್ವಿಗುಣಗೊಳಿಸಿ ತನ್ನ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕುಗಳಿಗೆ ಫರ್ಮಾನು ಜಾರಿಗೊಳಿಸಿದ್ದು ಅದರಂತೆ ಮುರುಡೇಶ್ವರದಲ್ಲಿ ಬೆಳಿಗ್ಗೆ ೬ ಗಂಟೆಯಿಂದ ೮ ಗಂಟೆವರೆಗೆ, ಸಂಜೆ ೧ರಿಂದ ೨ ಹಾಗೂ ರಾತ್ರಿ ೭ರಿಂದ ೮ ಗಂಟೆಯವರೆಗೆ, ಶಿರಾಲಿ ವ್ಯಾಪ್ತಿಯಲ್ಲಿ ಬೆಳಿಗ್ಗೆ ೬ರಿಂದ ೮, ಸಂಜೆ ೧೨ ರಿಂದ ೧, ಹಾಗೂ ರಾತ್ರಿ ೬ ರಿಂದ ೭ ಗಂಟೆಯವರೆಗೆ, ಅಳ್ವೆಕೋಡಿ ಭಾಗದಲ್ಲಿ ಬೆಳಿಗ್ಗೆ ೮ರಿಂದ ೧೦, ಸಂಜೆ೨ರಿಂದ೩ ಹಾಗೂ ರಾತ್ರಿ ೮ ರಿಂದ ೯ ಗಂಟೆಯವರೆಗೆ, ಕೊಪ್ಪ ವ್ಯಾಪ್ತಿಯಲ್ಲಿ ಬೆಳಿಗ್ಗೆ ೬ರಿಂದ ೧೨, ಸಾಯಂಕಾಲ ೩ರಿಂದ ೬, ರಾತ್ರಿ ೧೧ ರಿಂದ ೩ ಗಂಟೆಯವರೆಗೆ, ಭಟ್ಕಳ ನಗರವನ್ನು ಎರಡು ವಿಭಾಗವನ್ನಾಗಿ ಮಾಡಿದ್ದು...
ಪ್ರವಾದಿ ಅನುಸರಣೆಯಿಂದ ಸಕಲ ಸಮಸ್ಯೆಗಳ ಪರಿಹಾರ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಪ್ರವಾದಿ ಅನುಸರಣೆಯಿಂದ ಸಕಲ ಸಮಸ್ಯೆಗಳ ಪರಿಹಾರ ಅಬ್ದುಲ್ಲಾ ಜಾವಿದ್ ಭಟ್ಕಳ:೨೯ , ಅಸಮಾನತೆ , ಮೇಲು-ಕೀಳು ಉಚ್ಚ-ನೀಚ ಎಂಬ ಬೇಧ ಭಾವವು ನಮ್ಮ ದೇಶದ ಬಹುದೊಡ್ಡ ಸಮಸ್ಯೆಯಾಗಿದ್ದು ಈ ಸಮಸ್ಯೆಗೆ ಪರಿಹಾರ ಪ್ರವಾದಿ ಮುಹಮ್ಮದ್(ಸ) ರ ಜೀವನ ಚರ್ಯೆಯಲ್ಲಿ ನಾವು ಕಾಣುತ್ತೇವೆ ಪ್ರವಾದಿಯನ್ನು ಅನುಸರಿಸಿ ಜೀವಿಸುವುದೇ ಪ್ರಸಕ್ತಕಾಲದ ಎಲ್ಲ ಸಮಸ್ಯೆಗಳಿಗೆ ಪರಿಹಾ ಎಂದು ಜಮಾಆತೆ ಇಸ್ಲಾಮಿ ಹಿಂದ್ ಕರ್ನಾಟಕ ಮತ್ತು ಗೋವಾ ಘಟಕದ ಅಧ್ಯಕ್ಷ ಅಬ್ದುಲ್ಲಾ ಜಾವಿದ್ ಹೇಳಿದರು. ಅವರು ಮುರುಡೇಶ್ವರದ ಶಾದಿ ಮಹಾಲ್ ನಲ್ಲಿ ಜಮಾಆತೆ ಇಸ್ಲಾಮಿ ಹಿಂದ್ ಮುರುಡೇಶ್ವರ ಶಾಖೆ ‘’ ಸಮಸ್ಯೆಗಳಿಗೆ ಪರಿಹಾರ ಪ್ರವಾದಿ ಮುಹಮ್ಮದ್(ಸ) ರ ಅನುಸರಣೆಯಲ್ಲಿ ಎಂಬ ವಿಷಯದ ಕುರಿತು ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ನಮ್ಮಲ್ಲಿನ ಹಲವಾರು ಸಮಸ್ಯೆಗಳಿಗೆ ೧೪೦೦ ವರ್ಷಗಳ ಹಿಂದೆಯೆ ಪ್ರವಾದಿ ಮುಹಮ್ಮದ್(ಸ) ಅವರು ಪರಿಹಾರವನ್ನು ಸೂಚಿದ್ದಾರೆ ಎಂದ ಅವರು ಪ್ರವಾದಿ ಮುಹಮ್ಮದ್ ರ ಸಂಪೂರ್ಣ ಜೀವನ ಎಲ್ಲಾ ಮಾನವರಿಗೆ ಮಾದರಿಯಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಶಿವಮೊಗ್ಗ ವಿಭಾಗ ಸಂಚಾಲಕ ಮೌಲಾನ ಸೈಯ್ಯದ್ ಅಬ್ದುಲ್ ಹಸೀಬ್ ಮಾತನಾಡಿ ಮನುಷ್ಯ ಸಮಾಜದಲ್ಲಿ ಪ್ರಾಣಿಯ ಜೀವನ ಸಾಗಿಸುತ್ತಿದ್ದು ಬಂಡವಾಳ ಶಾಹಿಗಳು ಅತಿಶ್ರೀಮಂತರು ಶ್ರೀಮಂತರಾಗುತ್ತಿದ್ದ ಮಕ್ಕಾದಲ್ಲಿ ಎಲ್ಲಿ ಕಂಡರೂ ಅಂಧಕಾರ ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಅರಬಿನ ಮ...
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಜನರಿಲ್ಲದ ಜನಸ್ಪಂಧನ ಸಭೆ, ಶಾಸಕ ಅಸಮಾಧಾನ ಭಟ್ಕಳ:೨೮ ಶನಿವಾರದಂದು ಬೆಳಿಗ್ಗೆ ಇಲ್ಲಿನ ನ್ಯೂ ಇಂಗ್ಲೀಷ್ ಶಾಲೆಯ ಸಭಾಂಗಣದಲ್ಲಿ ಸೂಸಗಡಿ ಮಟ್ಟದ ಜನಸ್ಪಂದನಾ ಸಭೆಯು ಜರುಗಿತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಭಟ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಡಿ.ನಾಯ್ಕ ಜನಸ್ಪಂಧನಾ ಸಭೆಯಲ್ಲಿ ಜನರೇ ಇಲ್ಲದ್ದನ್ನು ಕಂಡು ತೀವ್ರ ಅಸಮಧಾನವನ್ನು ವ್ಯಕ್ತ ಪಡಿಸಿದರು. ಸರಕಾರದ ಯೋಜನೆ ಹಾಗೂ ಜನರ ಸಮಸ್ಯೆಗಳ ಬಗ್ಗೆ ತಿಳಿಯುವಂತಾಗಲು ಜನಸ್ಪಂದನಾ ಸಭೆಯು ಅತಿ ಉಪಯುಕ್ತವಾಗಿದ್ದು ಇಂತಹ ಸಭೆಗಳಲ್ಲಿ ಜನಸಾಮನ್ಯರು ಹಚ್ಚಾಗಿ ಪಾಲ್ಗೊಳ್ಳುವಂತಾಗಬೇಕು ಎಂದರು. ಜಸನ್ಪಂದನಾ ಸಭೆಯಲ್ಲಿ ಜನರಿಗೆ ಸರಕಾರದ ವಿವಿಧ ಇಲಾಖೆಗಳ ಬಗ್ಗೆ ಮಾಹಿತಿ,ಯೋಜನೆಯ ಕುರಿತು ಅರಿವು ಹಾಗೂ ಊರಿನ ಸಮಸ್ಯೆಗಳ ಪರಿಹಾರದ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಇಂತಹ ಸಭೆಗಳಿಗೆ ಸಮರ್ಪಕ ಪ್ರಚಾರ ನೀಡಿದರೆ ಜನರ ಪಾಲ್ಗೊಳ್ಳುವಿಕೆಯು ಹೆಚ್ಚಾಗುತ್ತದೆ ಆದ್ದರಿಂದ ಇಂತಹ ಸಭೆಗಳ ಕುರಿತು ಹೆಚ್ಚಿನ ಪ್ರಚಾರವನ್ನು ನೀಡಬೇಕೆಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಭಟ್ಕಳ ತಾಲೂಕಿನಲ್ಲಿ ಪಡಿತರ ಚೀಟಿಯ ಸಮಸ್ಯೆ ಇದ್ದು ಅವ್ಯವಸ್ಥೆಯಿಂದ ಕೂಡಿದೆ. ಇದನ್ನು ಕೂಡಲೇ ಸರಿಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು. ನಿಜವಾದ ಫಲಾನುಭವಿಗಳಿಗೆ ಬಿ ಪಿ ಎಲ್ ಕಾರ್ಡ ಸಿಗುವಂತಾಗಬೇಕು ಎಂದ ಅವರು ತಾಲೂಕಿನಲ್ಲಿ ಶೇ.೩೦ ರಷ್ಟು ಅನರ್ಹರು ಬಿ ಪಿ ಎಲ್ ಕಾರ್ಡ ಯೋಜನೆಯ ಲಾ...
ಮೂರು ತಿಂಗಳ ನಂತರ ಜರುಗಿದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಬಿಸಿಬಿಸಿ ಚರ್ಚೆ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಮೂರು ತಿಂಗಳ ನಂತರ ಜರುಗಿದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಬಿಸಿಬಿಸಿ ಚರ್ಚೆ ಭಟ್ಕಳ:೨೮ ಮೂರು ತಿಂಗಳ ಬಳಿಕ ನಡೆದ ಬಳಿಕ ಜರುಗಿದ ಭಟ್ಕಳ ಪುರಸಭೆಯ ಸಾಮಾನ್ಯ ಸಭೆಯು ಹಲವು ಬಿಸಿಬಿಸಿ ಚರ್ಚೆ, ಸದಸ್ಯರ ವಾಗ್ವಾದಗಳಿಂದ ಕೂಡಿ ಸ್ವಾರಸ್ಯಕರವಾಗಿತ್ತು. ಕೆಲವು ವಿಚಾರಕ್ಕೆ ಸಂಬಂಧಿಸಿದಂತೆ ಅಧ್ಯಕ್ಷರು ಮತ್ತು ಸದಸ್ಯರ ಮಧ್ಯೆ ವಾಗ್ವಾದವೂ ಉಂಟಾಯಿತು. ಸಾಗರ ರಸ್ತೆಯ ಗೋಳಿ ಕಟ್ಟೆಯ ಬಳಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸದಸ್ಯರ ಗಮನಕ್ಕೆ ತರದೇ ಲಕ್ಷಾಂತರ ರೂಪಾಯಿ ಬಿಡುಗಡೆ ಮಾಡಲಾದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಇನಾಯತುಲ್ಲಾ ಶಾಬಂದ್ರಿ ಅಧ್ಯಕ್ಷರು ಸಭೆಯಲ್ಲಿ ಠರಾವು ಮಾಡದೇ ಈ ರೀತಿ ಹಣ ಬಿಡುಗಡೆ ಮಾಡುವುದು ಸರಿಯಲ್ಲ ಎಂದರು. ಇದಕ್ಕುತ್ತರಿಸಿದ ಅಧ್ಯಕ್ಷ ಪರ್ವೇಜ್ ಕಾಶೀಂ ಜಿ ಬಿಡುಗಡೆಗೊಳಿಸಲಾದ ಹಣ ಬಾಕಿ ಇದ್ದ ಕುಡ್ಸೆಂಪ ಹಣವಾಗಿದೆ. ಈ ಹಿಂದೆ ಈ ಹಣ ವಾಪಾಸ್ ಹೋಗಿದ್ದು, ಮತ್ತೆ ಬಂದಿದ್ದರಿಂದ ಕಾಮಗಾರಿ ನಡೆಯುವಂತಾಗಿದೆ. ಇದೆಲ್ಲಾ ವಿಷಯವೂ ಸದಸ್ಯರಿಗೆ ಗೊತ್ತಿದೆ ಎಂದು ಸಮಜಾಯಿಸಿದರು. ಅಧ್ಯಕ್ಷರ ಉತ್ತರಕ್ಕೆ ತೃಪ್ತರಾಗದ ಶಾಬಂದ್ರಿ ಈ ಬಗ್ಗೆ ಠರಾವಿನಲ್ಲಿ ಸೇರ್ಪಡೆ ಮಾಡಬೇಕಿತ್ತು ಎಂದು ಹೇಳಿದರು. ಪುರಸಭೆಯಲ್ಲಿ ಕಂಪ್ಯೂಟರ್ ನೀಡಿಕೆಯಲ್ಲಿ ಅವ್ಯವಹಾರ ಮಾಡಿದವರಿಗೆ ಪುನ: ಗುತ್ತಿಗೆ ನೀಡಲಾಗಿದೆ. ನಗರದಲ್ಲಿ ಅವರನ್ನು ಹೊರತು ಪಡಿಸಿ ಬೇರೆ ಯಾರೂ ಕಂಪ್ಯೂಟರ್ ಸರಬರಾಜು ಮಾಡುವವರು ಇಲ್ಲವೇ ಎಂದು ಸದಸ್ಯ ಅಮ್ಜದ್ ಪ್ರಶ್ನಿಸಿದ್ದು ಇದಕ್ಕ...
ಪ್ರವಾದಿ ಮುಹಮ್ಮದ್ ಈ ಜಗತ್ತು ಕಂಡ ಅದ್ಬುತ ವ್ಯಕ್ತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಅಭಿಮತ.
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಪ್ರವಾದಿ ಮುಹಮ್ಮದ್ ಈ ಜಗತ್ತು ಕಂಡ ಅದ್ಬುತ ವ್ಯಕ್ತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಅಭಿಮತ. ಭಟ್ಕಳ: ಈ ಜಗತ್ತಿನ ಪ್ರತಿಯೊಂದು ರಂಗದಲ್ಲಿ ಯಾವ ರೀತಿಯಾಗಿ ನಡೆದುಕೊಳ್ಳಬೇಕೆಂದು ತೋರಿಸಿದ ಕೊನೆಯ ಪ್ರವಾದಿ ಮುಹಮ್ಮದ್ ಪೈಗಂಬರರು ಈ ಜಗತ್ತು ಕಂಡ ಒಂದು ಅದ್ಬುತ ವ್ಯಕ್ತಿಯಾಗಿದ್ದಾರೆ ಎಂದು ರಾಮಕ್ಷೇತ್ರ ಧರ್ಮಸ್ಥಳದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಂಜೆ ಭಟ್ಕಳದ ಹೋಟೆಲ್ ಟಿ.ಎಫ್.ಸಿ. ಹತ್ತಿರ ಮೈದಾನದಲ್ಲಿ ಎಸ್.ಐ.ಓ ಭಟ್ಕಳ ಶಾಖೆಯ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈಜಗತ್ತು ಯಾವ ರೀತಿ ಬಾಳಿ ಬದುಕಬೇಕು ಎಂಬುವುದನ್ನು ತಮ್ಮ ಸಂದೇಶ ಹಾಗೂ ಚಾರಿತ್ಯ್ರದ ಮೂಲಕ ತೋರಿಸಿಕೊಟ್ಟಂತಹ ಮಹಾನ್ ಚೈತನ್ಯ ಎಂದು ಬಿಂಬಿಸಿದ ಅವರು ಇಂದು ಅವರ ಅನುಯಾಯಿಗಳು ಪ್ರವಾದಿಯ ಸಂದೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ವಿಷಾಧಿಸಿದರು. ಮುಸ್ಲಿಮ ಮಹಿಳೆಯರು ಹೆಚ್ಚಿನ ಶಿಕ್ಷಣ ಪಡೆಯಬೇಕು, ಧರ್ಮಾಚರಣೆ ಬೇಕು ಧರ್ಮಾಂಧತೆ ಬೇಡ ಎಂಬ ಕಿವಿಮಾತನ್ನು ಹೇಳಿದ ಸ್ವಾಮಿಗಳು ಈ ದೇಶದ ಐಕ್ಯತೆಯು ರಾಜಕೀಯ ಕಾರಣಗಳಿಂದ ಹಾಳಾಗುತ್ತಿದೆ ಎಂದರು.ಯುವಕರು ತಮ್ಮ ಮನಸ್ಸು ಮತ್ತು ಬುದ್ದಿಯನ್ನು ಸ್ಥೀಮಿತದಲ್ಲಿಟ್ಟುಕೊಳ್ಳಬೇಕೆಂದು ಕಿವಿ ಮಾತು ಹೇಳಿದ್ದು ಆಸೆ ಆಕಾಂಕ್ಷೆಗಳಿಗೆ ಬಲಿಯಾಗಿ ಇಂದು ಯುವ ಸಮುದಾಯ ಭಯೋತ್ಪಾದನೆಯ ದಾರಿಯನ್ನು ...
ಪರಿಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಬೇಡ, ನಿರಂತರ ವಿದ್ಯುತ್ ನೀಡಿ. ಎಸ್.ಐ.ಓ ಆಗ್ರಹ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಪರಿಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಬೇಡ, ನಿರಂತರ ವಿದ್ಯುತ್ ನೀಡಿ. ಎಸ್.ಐ.ಓ ಆಗ್ರಹ ಭಟ್ಕಳ:ಭಟ್ಕಳ ಸೇರಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ಪದೇ ಪದೇ ವಿದ್ಯುತ್ ಲೋಡ್ ಶೆಡ್ಡಿಂಗ್ ಹೇರುವುದನ್ನು ಬಲವಾಗಿ ಖಂಡಿಸಿದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಎಸ್.ಐ.ಓ ಭಟ್ಕಳ ಘಟಕವು ಗುರುವಾರದಂದು ಇಲ್ಲಿನ ಸಹಾಯಕ ಕಮಿಷನರ್ ಕಛೇರಿಯಲ್ಲಿ ಪ್ರತಿಭಟನೆಯನ್ನು ವ್ಯಕ್ತ ಪಡಿಸಿ ಪರಿಕ್ಷೆ ಮುಗಿಯುವರೆಗೂ ದಿನದ ೨೪ ಗಂಟೆಯು ವಿದ್ಯುತ್ ನೀಡುವಂತೆ ಆಗ್ರಹಿಸಿತು. ಪರಿಕ್ಷಾ ಸಮಯದಲ್ಲಿ ಪದೇ ಪದೇ ವಿದ್ಯುತ್ ಕಡಿತದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಪ್ರತಿಕೂಲ ಪರಿಣಾಮ ಬೀರುತ್ತದೆ, ವಿದ್ಯಾಥಿಗಳು ಭವಿಷ್ಯದ ಸಂಪತ್ತಾಗಿದ್ದು ಅವರು ಆಗಾಗ ಕೈ ಕೊಡುವ ವಿದ್ಯುತ್ ಸಮಸ್ಯೆಯಿಂದ ತೀವ್ರವಾದ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಇದು ಅವರ ಮುಂಬರುವ ಭವಿಷ್ಯದ ಮೇಲೆ ಗಾಢ ಪರಿಣಾಮ ಬೀರಬಲ್ಲುದು. ಎಂದು ಅದು ಸಹಾಯಕ ಕಮಿಷನರ್ ಗೆ ನೀಡಿದ ಮನವಿಯಲ್ಲಿ ತಿಳಿಸಿದೆ. ಮನವಿಯಲ್ಲಿ ಕೆಲವೊಂದು ಬೇಡಿಕೆಗಳನ್ನು ಇಟ್ಟಿದ್ದು ಮೇ ತಿಂಗಳ ಕೊನೆಯವರೆಗೂ ನಿರಂತರ ೨೪ ಗಂಟೆ ವಿದ್ಯುತ್ ನೀಡಬೇಕು, ಸಾಯಂಕಾಲ ಹಾಗೂ ಬೆಳಿಗ್ಗೆ ವಿದ್ಯಾರ್ಥಿಗಳ ಅಭ್ಯಾಸದ ಸಮಯವಾದ್ದರಿಂದ ಯಾವುದೇ ಕಾರಣಕ್ಕೂ ಆ ಸಮಯದಲ್ಲಿ ವಿದ್ಯುತ್ ಕಡಿತಗೊಳಿಸಬಾರದು ಎಂಬ ಬೇಡಿಕೆಯನ್ನು ಇಡಲಾಗಿದೆ. ಹಾಗೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕೆಂದು ಅದು ಅಧಿಕಾರಿಗಳಿ...
ಹಾಡುವಳ್ಳಿಯಲ್ಲಿ ಸಾಂಕ್ರಮಿಕ, ರೋಗ ಓರ್ವ ಮಹಿಳೆ ಸಾವು. ಜನರಲ್ಲಿ ಮನದಲ್ಲಿ ಭೂತದ ಭ್ರಮೆ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಹಾಡುವಳ್ಳಿಯಲ್ಲಿ ಸಾಂಕ್ರಮಿಕ, ರೋಗ ಓರ್ವ ಮಹಿಳೆ ಸಾವು. ಜನರ ಮನದಲ್ಲಿ ಭೂತದ ಭ್ರಮೆ ಮುಹಮ್ಮದ್ ರಝಾ ಮಾನ್ವಿ. ಭಟ್ಕಳ:೨೬, ಭಟ್ಕಳ ನಗರದಿಂದ ೨೦ಕಿ.ಮಿ ದೂರದಲ್ಲಿರುವ ಹಿಂದುಳಿದ ಪ್ರದೇಶವೆಂದೇ ಗುರುತಿಸಲ್ಪಡುವ ಹಾಡುವಳ್ಳಿಯ ಕೆಲವು ಪ್ರದೇಶಗಳಲ್ಲಿ ಯಾವುದೋ ಸಾಂಕ್ರಾಮಿಕ ರೋಗವು ಮನೆಮಾಡಿಕೊಂಡಿದ್ದು ಅದೀಗ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು ಅಲ್ಲಿನ ಜನತೆಯಲ್ಲಿ ದಿಗ್ಭ್ರಮೆಯನ್ನು ಮೂಡಿಸಿದೆ. ಆತಂಕಿತ ಗ್ರಾಮೀಣ ಜನತೆ ಇದೊಂದು ಭೂತ (ಗಾಳಿ) ಎಂದು ಭಾವಿಸಿ ಮಾಟ ಮಂತ್ರ ಅಥವ ಮತ್ಯಾವುದೋ ಬಾಬಗಳಿಗೆ ಮೊರೆಹೋಗಿರುವ ಸಂಗತಿ ಬೆಳಕಿಗೆ ಬಂದಿದೆ. ಕಳೆದ ಎರಡು ತಿಂಗಳ ಹಿಂದೆ ಹಾಡುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಯಾಣಿ, ಮೂರ್ಕೋಡಿ,ತೋಟದಮಕ್ಕಿ ಮುಂತಾದ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡಿದೆ ಎನ್ನಲಾಗಿದ್ದು ಅದೀಗ ಬಹಿರಂಗಗೊಂಡಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದಲೋ ಅಥವಾ ಇನ್ನಿತರ ಯಾವುದೋ ಕಾರಣದಿಂದಲೋ ಓರ್ವ ಮಹಿಳೆ ಇಲ್ಲಿ ಸಾವನ್ನಪ್ಪಿರುವುದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಮೃತ ಮಹಿಳೆ ಮಾಸ್ತಮ್ಮ ನಾರಾಯಣ ನಾಯ್ಕ (೩೫) ಕಳೆದ ಕೆಲವು ದಿನಗಳಿಂದ ತೀವ್ರತರವಾದ ಜ್ವರದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಆಕೆಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನೂ ಕೂಡ ನೀಡಲಾಗಿತ್ತು. ಆಕೆಯನ್ನು ಬದುಕಿಸಲು ಕುಟುಂಬದವರು ಹಳ್ಳಿವೈದ್ಯರ ಮೊರೆ ಹೋಗಿದ್ದು ಅವ...