ಪೋಸ್ಟ್‌ಗಳು

ಮಾರ್ಚ್ 27, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪ್ರವಾದಿ ಮುಹಮ್ಮದ್ ಈ ಜಗತ್ತು ಕಂಡ ಅದ್ಬುತ ವ್ಯಕ್ತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಅಭಿಮತ.

ಇಮೇಜ್
ಪ್ರವಾದಿ ಮುಹಮ್ಮದ್ ಈ ಜಗತ್ತು ಕಂಡ ಅದ್ಬುತ ವ್ಯಕ್ತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಅಭಿಮತ. ಭಟ್ಕಳ: ಈ ಜಗತ್ತಿನ ಪ್ರತಿಯೊಂದು ರಂಗದಲ್ಲಿ ಯಾವ ರೀತಿಯಾಗಿ ನಡೆದುಕೊಳ್ಳಬೇಕೆಂದು ತೋರಿಸಿದ ಕೊನೆಯ ಪ್ರವಾದಿ ಮುಹಮ್ಮದ್ ಪೈಗಂಬರರು ಈ ಜಗತ್ತು ಕಂಡ ಒಂದು ಅದ್ಬುತ ವ್ಯಕ್ತಿಯಾಗಿದ್ದಾರೆ ಎಂದು ರಾಮಕ್ಷೇತ್ರ ಧರ್ಮಸ್ಥಳದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಂಜೆ ಭಟ್ಕಳದ ಹೋಟೆಲ್ ಟಿ.ಎಫ್.ಸಿ. ಹತ್ತಿರ ಮೈದಾನದಲ್ಲಿ   ಎಸ್.ಐ.ಓ ಭಟ್ಕಳ ಶಾಖೆಯ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈಜಗತ್ತು ಯಾವ ರೀತಿ ಬಾಳಿ ಬದುಕಬೇಕು ಎಂಬುವುದನ್ನು ತಮ್ಮ ಸಂದೇಶ ಹಾಗೂ ಚಾರಿತ್ಯ್ರದ ಮೂಲಕ ತೋರಿಸಿಕೊಟ್ಟಂತಹ ಮಹಾನ್ ಚೈತನ್ಯ ಎಂದು ಬಿಂಬಿಸಿದ ಅವರು ಇಂದು ಅವರ ಅನುಯಾಯಿಗಳು ಪ್ರವಾದಿಯ ಸಂದೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ವಿಷಾಧಿಸಿದರು. ಮುಸ್ಲಿಮ ಮಹಿಳೆಯರು ಹೆಚ್ಚಿನ ಶಿಕ್ಷಣ ಪಡೆಯಬೇಕು, ಧರ್ಮಾಚರಣೆ ಬೇಕು ಧರ್ಮಾಂಧತೆ ಬೇಡ ಎಂಬ ಕಿವಿಮಾತನ್ನು ಹೇಳಿದ ಸ್ವಾಮಿಗಳು ಈ ದೇಶದ ಐಕ್ಯತೆಯು ರಾಜಕೀಯ ಕಾರಣಗಳಿಂದ ಹಾಳಾಗುತ್ತಿದೆ ಎಂದರು.ಯುವಕರು ತಮ್ಮ ಮನಸ್ಸು ಮತ್ತು ಬುದ್ದಿಯನ್ನು ಸ್ಥೀಮಿತದಲ್ಲಿಟ್ಟುಕೊಳ್ಳಬೇಕೆಂದು ಕಿವಿ ಮಾತು ಹೇಳಿದ್ದು ಆಸೆ ಆಕಾಂಕ್ಷೆಗಳಿಗೆ ಬಲಿಯಾಗಿ ಇಂದು ಯುವ ಸಮುದಾಯ ಭಯೋತ್ಪಾದನೆಯ ದಾರಿಯನ್ನು ...

ಪರಿಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಬೇಡ, ನಿರಂತರ ವಿದ್ಯುತ್ ನೀಡಿ. ಎಸ್.ಐ.ಓ ಆಗ್ರಹ

ಇಮೇಜ್
  ಪರಿಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಬೇಡ, ನಿರಂತರ ವಿದ್ಯುತ್ ನೀಡಿ.  ಎಸ್.ಐ.ಓ ಆಗ್ರಹ ಭಟ್ಕಳ:ಭಟ್ಕಳ ಸೇರಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ಪದೇ ಪದೇ ವಿದ್ಯುತ್ ಲೋಡ್ ಶೆಡ್ಡಿಂಗ್ ಹೇರುವುದನ್ನು ಬಲವಾಗಿ ಖಂಡಿಸಿದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಎಸ್.ಐ.ಓ ಭಟ್ಕಳ ಘಟಕವು ಗುರುವಾರದಂದು ಇಲ್ಲಿನ ಸಹಾಯಕ ಕಮಿಷನರ್ ಕಛೇರಿಯಲ್ಲಿ ಪ್ರತಿಭಟನೆಯನ್ನು ವ್ಯಕ್ತ ಪಡಿಸಿ ಪರಿಕ್ಷೆ ಮುಗಿಯುವರೆಗೂ ದಿನದ ೨೪ ಗಂಟೆಯು ವಿದ್ಯುತ್ ನೀಡುವಂತೆ ಆಗ್ರಹಿಸಿತು.  ಪರಿಕ್ಷಾ ಸಮಯದಲ್ಲಿ ಪದೇ ಪದೇ ವಿದ್ಯುತ್ ಕಡಿತದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಪ್ರತಿಕೂಲ ಪರಿಣಾಮ ಬೀರುತ್ತದೆ, ವಿದ್ಯಾಥಿಗಳು ಭವಿಷ್ಯದ ಸಂಪತ್ತಾಗಿದ್ದು ಅವರು ಆಗಾಗ ಕೈ ಕೊಡುವ ವಿದ್ಯುತ್ ಸಮಸ್ಯೆಯಿಂದ ತೀವ್ರವಾದ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಇದು ಅವರ ಮುಂಬರುವ ಭವಿಷ್ಯದ ಮೇಲೆ ಗಾಢ ಪರಿಣಾಮ ಬೀರಬಲ್ಲುದು. ಎಂದು ಅದು ಸಹಾಯಕ ಕಮಿಷನರ್ ಗೆ ನೀಡಿದ ಮನವಿಯಲ್ಲಿ ತಿಳಿಸಿದೆ. ಮನವಿಯಲ್ಲಿ ಕೆಲವೊಂದು ಬೇಡಿಕೆಗಳನ್ನು ಇಟ್ಟಿದ್ದು ಮೇ ತಿಂಗಳ ಕೊನೆಯವರೆಗೂ ನಿರಂತರ ೨೪ ಗಂಟೆ ವಿದ್ಯುತ್ ನೀಡಬೇಕು, ಸಾಯಂಕಾಲ ಹಾಗೂ ಬೆಳಿಗ್ಗೆ ವಿದ್ಯಾರ್ಥಿಗಳ ಅಭ್ಯಾಸದ ಸಮಯವಾದ್ದರಿಂದ ಯಾವುದೇ ಕಾರಣಕ್ಕೂ ಆ ಸಮಯದಲ್ಲಿ ವಿದ್ಯುತ್ ಕಡಿತಗೊಳಿಸಬಾರದು ಎಂಬ ಬೇಡಿಕೆಯನ್ನು ಇಡಲಾಗಿದೆ. ಹಾಗೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕೆಂದು ಅದು ಅಧಿಕಾರಿಗಳಿ...