ಪೋಸ್ಟ್‌ಗಳು

ಮಾರ್ಚ್ 28, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪ್ರವಾದಿ ಅನುಸರಣೆಯಿಂದ ಸಕಲ ಸಮಸ್ಯೆಗಳ ಪರಿಹಾರ

ಇಮೇಜ್
ಪ್ರವಾದಿ ಅನುಸರಣೆಯಿಂದ ಸಕಲ ಸಮಸ್ಯೆಗಳ ಪರಿಹಾರ ಅಬ್ದುಲ್ಲಾ ಜಾವಿದ್ ಭಟ್ಕಳ:೨೯ ,   ಅಸಮಾನತೆ , ಮೇಲು-ಕೀಳು ಉಚ್ಚ-ನೀಚ ಎಂಬ ಬೇಧ ಭಾವವು ನಮ್ಮ ದೇಶದ ಬಹುದೊಡ್ಡ ಸಮಸ್ಯೆಯಾಗಿದ್ದು ಈ ಸಮಸ್ಯೆಗೆ ಪರಿಹಾರ ಪ್ರವಾದಿ ಮುಹಮ್ಮದ್(ಸ) ರ ಜೀವನ ಚರ್ಯೆಯಲ್ಲಿ ನಾವು ಕಾಣುತ್ತೇವೆ ಪ್ರವಾದಿಯನ್ನು ಅನುಸರಿಸಿ ಜೀವಿಸುವುದೇ ಪ್ರಸಕ್ತಕಾಲದ ಎಲ್ಲ ಸಮಸ್ಯೆಗಳಿಗೆ ಪರಿಹಾ ಎಂದು ಜಮಾ‌ಆತೆ ಇಸ್ಲಾಮಿ ಹಿಂದ್ ಕರ್ನಾಟಕ ಮತ್ತು ಗೋವಾ ಘಟಕದ ಅಧ್ಯಕ್ಷ ಅಬ್ದುಲ್ಲಾ ಜಾವಿದ್ ಹೇಳಿದರು. ಅವರು ಮುರುಡೇಶ್ವರದ ಶಾದಿ ಮಹಾಲ್ ನಲ್ಲಿ ಜಮಾ‌ಆತೆ ಇಸ್ಲಾಮಿ ಹಿಂದ್ ಮುರುಡೇಶ್ವರ ಶಾಖೆ ‘’ ಸಮಸ್ಯೆಗಳಿಗೆ ಪರಿಹಾರ ಪ್ರವಾದಿ ಮುಹಮ್ಮದ್(ಸ) ರ ಅನುಸರಣೆಯಲ್ಲಿ ಎಂಬ ವಿಷಯದ ಕುರಿತು ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ನಮ್ಮಲ್ಲಿನ ಹಲವಾರು ಸಮಸ್ಯೆಗಳಿಗೆ ೧೪೦೦ ವರ್ಷಗಳ ಹಿಂದೆಯೆ ಪ್ರವಾದಿ ಮುಹಮ್ಮದ್(ಸ) ಅವರು ಪರಿಹಾರವನ್ನು ಸೂಚಿದ್ದಾರೆ ಎಂದ ಅವರು ಪ್ರವಾದಿ ಮುಹಮ್ಮದ್ ರ ಸಂಪೂರ್ಣ ಜೀವನ ಎಲ್ಲಾ ಮಾನವರಿಗೆ ಮಾದರಿಯಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಶಿವಮೊಗ್ಗ ವಿಭಾಗ ಸಂಚಾಲಕ ಮೌಲಾನ ಸೈಯ್ಯದ್ ಅಬ್ದುಲ್ ಹಸೀಬ್ ಮಾತನಾಡಿ ಮನುಷ್ಯ ಸಮಾಜದಲ್ಲಿ ಪ್ರಾಣಿಯ ಜೀವನ ಸಾಗಿಸುತ್ತಿದ್ದು ಬಂಡವಾಳ ಶಾಹಿಗಳು ಅತಿಶ್ರೀಮಂತರು ಶ್ರೀಮಂತರಾಗುತ್ತಿದ್ದ ಮಕ್ಕಾದಲ್ಲಿ ಎಲ್ಲಿ ಕಂಡರೂ ಅಂಧಕಾರ ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಅರಬಿನ ಮ...
ಇಮೇಜ್
ಜನರಿಲ್ಲದ ಜನಸ್ಪಂಧನ ಸಭೆ, ಶಾಸಕ ಅಸಮಾಧಾನ ಭಟ್ಕಳ:೨೮ ಶನಿವಾರದಂದು ಬೆಳಿಗ್ಗೆ ಇಲ್ಲಿನ ನ್ಯೂ ಇಂಗ್ಲೀಷ್ ಶಾಲೆಯ ಸಭಾಂಗಣದಲ್ಲಿ ಸೂಸಗಡಿ ಮಟ್ಟದ ಜನಸ್ಪಂದನಾ ಸಭೆಯು ಜರುಗಿತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಭಟ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಡಿ.ನಾಯ್ಕ ಜನಸ್ಪಂಧನಾ ಸಭೆಯಲ್ಲಿ ಜನರೇ ಇಲ್ಲದ್ದನ್ನು ಕಂಡು ತೀವ್ರ ಅಸಮಧಾನವನ್ನು ವ್ಯಕ್ತ ಪಡಿಸಿದರು. ಸರಕಾರದ ಯೋಜನೆ ಹಾಗೂ ಜನರ ಸಮಸ್ಯೆಗಳ ಬಗ್ಗೆ ತಿಳಿಯುವಂತಾಗಲು ಜನಸ್ಪಂದನಾ ಸಭೆಯು ಅತಿ ಉಪಯುಕ್ತವಾಗಿದ್ದು ಇಂತಹ ಸಭೆಗಳಲ್ಲಿ ಜನಸಾಮನ್ಯರು ಹಚ್ಚಾಗಿ ಪಾಲ್ಗೊಳ್ಳುವಂತಾಗಬೇಕು ಎಂದರು. ಜಸನ್ಪಂದನಾ ಸಭೆಯಲ್ಲಿ ಜನರಿಗೆ ಸರಕಾರದ ವಿವಿಧ ಇಲಾಖೆಗಳ ಬಗ್ಗೆ ಮಾಹಿತಿ,ಯೋಜನೆಯ ಕುರಿತು ಅರಿವು ಹಾಗೂ ಊರಿನ ಸಮಸ್ಯೆಗಳ ಪರಿಹಾರದ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಇಂತಹ ಸಭೆಗಳಿಗೆ ಸಮರ್ಪಕ ಪ್ರಚಾರ ನೀಡಿದರೆ ಜನರ ಪಾಲ್ಗೊಳ್ಳುವಿಕೆಯು ಹೆಚ್ಚಾಗುತ್ತದೆ ಆದ್ದರಿಂದ ಇಂತಹ ಸಭೆಗಳ ಕುರಿತು ಹೆಚ್ಚಿನ ಪ್ರಚಾರವನ್ನು ನೀಡಬೇಕೆಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಭಟ್ಕಳ ತಾಲೂಕಿನಲ್ಲಿ ಪಡಿತರ ಚೀಟಿಯ ಸಮಸ್ಯೆ ಇದ್ದು ಅವ್ಯವಸ್ಥೆಯಿಂದ ಕೂಡಿದೆ. ಇದನ್ನು ಕೂಡಲೇ ಸರಿಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು. ನಿಜವಾದ ಫಲಾನುಭವಿಗಳಿಗೆ ಬಿ ಪಿ ಎಲ್ ಕಾರ್ಡ ಸಿಗುವಂತಾಗಬೇಕು ಎಂದ ಅವರು ತಾಲೂಕಿನಲ್ಲಿ ಶೇ.೩೦ ರಷ್ಟು ಅನರ್ಹರು ಬಿ ಪಿ ಎಲ್ ಕಾರ್ಡ ಯೋಜನೆಯ ಲಾ...

ಮೂರು ತಿಂಗಳ ನಂತರ ಜರುಗಿದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಬಿಸಿಬಿಸಿ ಚರ್ಚೆ

ಇಮೇಜ್
ಮೂರು ತಿಂಗಳ ನಂತರ ಜರುಗಿದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಬಿಸಿಬಿಸಿ ಚರ್ಚೆ ಭಟ್ಕಳ:೨೮ ಮೂರು ತಿಂಗಳ ಬಳಿಕ ನಡೆದ ಬಳಿಕ ಜರುಗಿದ ಭಟ್ಕಳ ಪುರಸಭೆಯ ಸಾಮಾನ್ಯ ಸಭೆಯು ಹಲವು ಬಿಸಿಬಿಸಿ ಚರ್ಚೆ, ಸದಸ್ಯರ ವಾಗ್ವಾದಗಳಿಂದ ಕೂಡಿ ಸ್ವಾರಸ್ಯಕರವಾಗಿತ್ತು. ಕೆಲವು ವಿಚಾರಕ್ಕೆ ಸಂಬಂಧಿಸಿದಂತೆ ಅಧ್ಯಕ್ಷರು ಮತ್ತು ಸದಸ್ಯರ ಮಧ್ಯೆ ವಾಗ್ವಾದವೂ ಉಂಟಾಯಿತು. ಸಾಗರ ರಸ್ತೆಯ ಗೋಳಿ ಕಟ್ಟೆಯ ಬಳಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸದಸ್ಯರ ಗಮನಕ್ಕೆ ತರದೇ ಲಕ್ಷಾಂತರ ರೂಪಾಯಿ ಬಿಡುಗಡೆ ಮಾಡಲಾದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಇನಾಯತುಲ್ಲಾ ಶಾಬಂದ್ರಿ ಅಧ್ಯಕ್ಷರು ಸಭೆಯಲ್ಲಿ ಠರಾವು ಮಾಡದೇ ಈ ರೀತಿ ಹಣ ಬಿಡುಗಡೆ ಮಾಡುವುದು ಸರಿಯಲ್ಲ ಎಂದರು. ಇದಕ್ಕುತ್ತರಿಸಿದ ಅಧ್ಯಕ್ಷ ಪರ್ವೇಜ್ ಕಾಶೀಂ ಜಿ ಬಿಡುಗಡೆಗೊಳಿಸಲಾದ ಹಣ ಬಾಕಿ ಇದ್ದ ಕುಡ್ಸೆಂಪ ಹಣವಾಗಿದೆ. ಈ ಹಿಂದೆ ಈ ಹಣ ವಾಪಾಸ್ ಹೋಗಿದ್ದು, ಮತ್ತೆ ಬಂದಿದ್ದರಿಂದ ಕಾಮಗಾರಿ ನಡೆಯುವಂತಾಗಿದೆ. ಇದೆಲ್ಲಾ ವಿಷಯವೂ ಸದಸ್ಯರಿಗೆ ಗೊತ್ತಿದೆ ಎಂದು ಸಮಜಾಯಿಸಿದರು. ಅಧ್ಯಕ್ಷರ ಉತ್ತರಕ್ಕೆ ತೃಪ್ತರಾಗದ ಶಾಬಂದ್ರಿ ಈ ಬಗ್ಗೆ ಠರಾವಿನಲ್ಲಿ ಸೇರ್ಪಡೆ ಮಾಡಬೇಕಿತ್ತು ಎಂದು ಹೇಳಿದರು. ಪುರಸಭೆಯಲ್ಲಿ ಕಂಪ್ಯೂಟರ್ ನೀಡಿಕೆಯಲ್ಲಿ ಅವ್ಯವಹಾರ ಮಾಡಿದವರಿಗೆ ಪುನ: ಗುತ್ತಿಗೆ ನೀಡಲಾಗಿದೆ. ನಗರದಲ್ಲಿ ಅವರನ್ನು ಹೊರತು ಪಡಿಸಿ ಬೇರೆ ಯಾರೂ ಕಂಪ್ಯೂಟರ್ ಸರಬರಾಜು ಮಾಡುವವರು ಇಲ್ಲವೇ ಎಂದು ಸದಸ್ಯ ಅಮ್ಜದ್ ಪ್ರಶ್ನಿಸಿದ್ದು ಇದಕ್ಕ...