ಪೋಸ್ಟ್‌ಗಳು

ಏಪ್ರಿಲ್ 1, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

yammarmanvi: ಭಟ್ಕಳ ಯುವ ನ್ಯಾಯವಾದಿ ಜಾವೀದ್ ಬಾತಿನ್ ಇನ್ನಿಲ್ಲ.

yammarmanvi: ಭಟ್ಕಳ ಯುವ ನ್ಯಾಯವಾದಿ ಜಾವೀದ್ ಬಾತಿನ್ ಇನ್ನಿಲ್ಲ.

ಭಟ್ಕಳ ಸಂಕ್ಷಿಪ್ತ ಸುದ್ದಿಗಳು

ಇಮೇಜ್
ವೈಭವದಿಂದ ಜರುಗಿದ ಶಿರಾಲಿ ರಥೋತ್ಸವ ಭಟ್ಕಳ: ೩೧,ಶಿರಾಲಿಯ ಚಿತ್ರಾಪುರ ಮಠದ ಶ್ರೀ ಭವಾನಿಶಂಕರ ದೇವರ ೧೪೯ನೇ ರಥೋತ್ಸವ ನಿನ್ನೆ ಸಂಜೆ ಚಿತ್ರಾಪುರ ಮಠಾಧೀಶ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು. ಶ್ರೀ ಮಠದಲ್ಲಿ ರಾಮನವಮಿಯ ದಿನದಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದವು. ನಿನ್ನೆ ಸಂಜೆ ಐದು ಗಂಟೆಗೆ ಸರಿಯಾಗಿ ರಥವನ್ನು ಎಳೆಯಲಾಯಿತು. ರಥದಲ್ಲಿ ಅರ್ಚಕರೊಂದಿಗೆ ಸ್ವಾಮೀಜಿಯವರೂ ಸಹ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ರಥಕಾಣಿಕೆ, ದೇವರಿಗೆ ಪೂಜೆ ಪುನಸ್ಕಾರ ಸಲ್ಲಿಸಿದರು. ರಥೋತ್ಸವದ ನಂತರದಲ್ಲಿ ಶ್ರೀಗಳ ಉಪಸ್ಥಿತಿಯಲ್ಲಿ ಧರ್ಮ ಸಭಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಉನ್ನತ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಠದ ಆಡಳಿತ ಮಂಡಳಿಯ ಅಧ್ಯಕ್ಷ ವಿನೋದ ಎಣ್ಣೆಮಡಿ, ವ್ಯವಸ್ಥಾಪಕ ಭವಾನಿಶಂಖರ ಕೈಲಾಜೆ, ಟ್ರಸ್ಟಿಗಳಾದ ಪ್ರಕಾಶ ಗೋಕರ್ಣ ಮುಂತಾದವರು ಉಪಸ್ಥಿತರಿದ್ದರು. ಚಿತ್ರಾಪುರ ಲೋಕಲ್ ಸಭಾದ ಅಧ್ಯಕ್ಷ ಎಸ್ ಜಿ ಕೊಪ್ಪಿಕರ ಸ್ವಾಗತಿಸಿ, ವಂದಿಸಿದರು. ಇಂದು ಬೆಳಿಗ್ಗೆ ದೇವರ ಮೃಗಭೇಟೆ ಉತ್ಸವವೂ ಸಹ ಅದ್ದೂರಿಯಾಗಿ ನಡೆಯಿತು. ಎ.೧ ರಂದು ಅವಬೃತ ಸ್ನಾನ(ಒಕ್ಕುಳಿ), ಧ್ವಜಾರೋಹಣ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ನಿನ್ನೆ ಸಂಜೆ ನಡೆದ ರಥೋತ್ಸವದ ಸಂದರ್ಭದಲ್ಲಿ ಸಿಪಿ‌ಐ ಗುರು ಮಾಥೂರು ನೇತೃತ್ವ...

ಭಟ್ಕಳದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ೨೪೭೭ ವಿದ್ಯಾರ್ಥಿಗಳು

ಭಟ್ಕಳದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ೨೪೭೭ ವಿದ್ಯಾರ್ಥಿಗಳು ಭಟ್ಕಳ:೩೧ ಎಸ್ ಎಸ್ ಎಲ್ ಸಿ ಪರೀಕ್ಷೆ ನಾಳೆಯಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಭಟ್ಕಳದ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಲಾಗಿದೆ. ಈ ಸಲ ತಾಲೂಕಿನ ೨೮ ಪ್ರೌಢಶಾಲೆಗಳಿಂದ ಒಟ್ಟೂ ೨೪೭೭ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನಗರದ ನ್ಯೂ ಇಂಗ್ಲೀಷ್ ಸ್ಕೂಲ, ಅಂಜುಮಾನ ಆಂಗ್ಲೋ ಉರ್ದು ಹೈಸ್ಕೂಲ್, ಅಂಜುಮಾನ ಹೆಣ್ಣುಮಕ್ಕಳ ಹೈಸ್ಕೂಲ್,ಸೋನಾರಕೇರಿ ಸರಕಾರಿ ಪ್ರೌಢಶಾಲೆ, ಬೆಳಕೆ ಸರಕಾರಿ ಪ್ರೌಢಶಾಲೆ, ಶಿರಾಲಿ ಜನತಾ ವಿದ್ಯಾಲಯ, ಮುರ್ಡೇಶ್ವರ ಜನತಾ ವಿದ್ಯಾಲಯ, ಮುರ್ಡೇಶ್ವರದ ನ್ಯಾಶನಲ್ ಹೈಸ್ಕೂಲ್‌ನಲ್ಲಿ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ. ಈ ಸಲ ಬೆಳಕೆ ಹೈಸ್ಕೂಲಿನಲ್ಲಿ ಹೊಸಾಗಿ ಪರೀಕ್ಷಾ ಕೇಂದ್ರವನ್ನು ತೆರೆದಿರುವುದು ಅಲ್ಲಿನ ವಿದ್ಯಾರ್ಥಿಗಳಿಗೆ ನಗರಕ್ಕೆ ಬರುವುದು ತಪ್ಪಿದಂತಾಗಿದೆ. ತಾಲೂಕಿನಲ್ಲಿ ಎಂಟು ಸರಕಾರಿ, ೯ ಅನುದಾನಿತ ಹಾಗೂ ೧೧ ಅನುದಾನ ರಹಿತ ಸೇರಿದಂತೆ ಒಟ್ಟೂ ೨೮ ಪ್ರೌಢಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಶಾಲೆಗಳಿಂದ ೧೧೯೯ ಹೆಣ್ಣುಮಕ್ಕಳು ಹಾಗೂ ೧೨೭೮ ಗಂಡು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಎಂಟು ಪರೀಕ್ಷಾ ಕೇಂದ್ರಗಳಿಗೆ ಅನುದಾನಿತ ಹಾಗೂ ಅನುದಾನಿತ ಪ್ರೌಢಶಾಲೆಗಳ ಹಾಗೂ ಪ್ರಾಥಮಿಕ ಶಾಲೆಗಳ ಸುಮಾರು ೧೨೩ ಶಿಕ್ಷಕರನ್ನು ಕೊಟಡಿ ಮೇಲ್ವಿಚಾರಕರನ್ನಾಗಿ ನೇಮಕಗೊಳಿಸಲಾಗಿದೆ. ಕ್ಷೇತ್ರ ಸಂಪನ್ಮೂಲ ಅಧ...

ಅವಧಿ ಮುಗಿಸಿದ ಪಂಚಾಯತ್ ಅಧಿಕಾರ. ಒಂದು ಹಿನ್ನೋಟ

ಅವಧಿ ಮುಗಿಸಿದ ಪಂಚಾಯತ್ ಅಧಿಕಾರ. ಒಂದು ಹಿನ್ನೋಟ ಭಟ್ಕಳ:೩೧, ಅಂತೋ ಭಟ್ಕಳ ತಾಲೂಕಿನ ಹದಿನಾರು ಗ್ರಾಮ ಪಂಚಾಯತ್‌ಗಳು ತಮ್ಮ ಐದು ವರ್ಷದ ಆಡಳಿತ ಅವಧಿಯನ್ನು ಮುಗಿಸಿ ನಿಟ್ಟುಸಿರು ಬಿಟ್ಟಿವೆ. ಇದೀಗ ಅದರ ಅಧಿಕಾರ ಆಡಳಿತಾಧಿಕಾರಿಗಳ ಕೈಗೆ ಬಂದಿದೆ. ಅಂತೋ ಹಳ್ಳಿಯ ಪಂಚಾಯತ್ ರಾಜಕೀಯಕ್ಕೆ ಒಂದಷ್ಟು ಬ್ರೇಕ್. ಅದು ಸ್ವಲ್ಪ ದಿನ ಎನ್ನಬಹುದು. ಮತ್ತೆ ಎಪ್ರಿಲ್ ತಿಂಗಳಲ್ಲಿ ಪಂಚಯಾತ್ ಚುನಾವಣೆ ನಡೆಸುವುದಾಗಿ ನಮ್ಮ ಸಿ.ಎಮ್. ಘೋಷಿಸಿದ್ದಾರೆ. ಹೋಗಲಿ ಬಿಡಿ. ವಿಷಯ ಅದಲ್ಲ. ವಿಷಯ ಇರುವುದು ಅವಧಿ ಮುಗಿಸಿದ ಪಂಚಾಯತ್ ಅಧಿಕಾರ, ಅದರ ಹಿನ್ನೋಟವನ್ನು ವಿಮರ್ಶಿಸುವುದೆ ಈ ಬರಹದ ಉದ್ದೇಶ. ಕಳೆದ ಐದು ವರ್ಷಗಳಲ್ಲಿ ತಾಲೂಕಿನ ಒಂದೊಂದು ಗ್ರಾಮ ಪಂಚಾಯತ್‌ಗಳು ಒಂದೊಂದು ರೀತಿಯಲ್ಲಿ ಸುದ್ದಿ ಮಾಡಿ ಜನರ ಗಮನ ಸೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಭಟ್ಕಳದ ಕೆಲವು ಪಂಚಾಯತ್‌ಗಳು ವಿವಿಧ ಕಾರಣಕ್ಕೆ ಜಿಲ್ಲೆಯಲ್ಲೇ ಪ್ರಸಿದ್ದಿ ಪಡೆದಿದೆ. ಇಲ್ಲಿನ ಬಹುತೇಕ ಪಂಚಾಯತ್‌ಗಳು ಸದಾ ಗೊಂದಲ, ರಾಜಕೀಯ ಒತ್ತಡ, ಜನಪ್ರತಿನಿಧಿಗಳ ಕಿತ್ತಾಟದಿಂದಲೇ ತನ್ನ ಆಡಳಿತದ ಅವಧಿಯನ್ನು ಮುಗಿಸಿ ಬಿಟ್ಟಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಕೆಲವು ಕಡೆ ಅಧ್ಯಕ್ಷರು-ಕಾರ್ಯದರ್ಶಿ ನಡುವೆ ವೈಮನಸ್ಸು ಬಂದು ಬಡಿದಾಡಿಕೊಂಡು ಪೊಲೀಸ್ ಠಾಣಾ ಮೆಟ್ಟಿಲೂ ಏರಿದ ಪ್ರಸಂಗವೂ ಸಹ ನಡೆದಿತ್ತು. ಅದರಂತೆ ಕೆಲವು ಕಡೆ ಕಡೆ ಚುನಾಯಿತ ಪ್ರತಿನಿಧಿಗಳಲ್ಲಿ ಹೊಂದಾಣಿಕೆ ಇಲ್ಲದೇ ಗೊಂದಲ ಉಂಟಾದ ಘಟನೆಯೂ ...

ಭಟ್ಕಳ ಯುವ ನ್ಯಾಯವಾದಿ ಜಾವೀದ್ ಬಾತಿನ್ ಇನ್ನಿಲ್ಲ.

ಇಮೇಜ್
ಭಟ್ಕಳ ಯುವ ನ್ಯಾಯವಾದಿ ಜಾವೀದ್ ಬಾತಿನ್ ಇನ್ನಿಲ್ಲ . ಭಟ್ಕಳ:೩೧ ಭಟ್ಕಳದ ಯುವ ನ್ಯಾಯವಾದಿ ಜಾವೀದ್ ಆಹ್ಮದ್ ಬಾತಿನ್ ಎಸ್.ಎಮ್. ಇವರು ಬುಧವಾರ ರಾತ್ರಿ ಸುಮಾರು ೮ ಗಂಟೆಗೆ ಶಿರೂರಿನ ಸಮೀಪ ಬೈಕ್ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಅಪಾಘಾತವು ಹೇಗೆ ಸಂಭವಿಸಿದ್ದು ಎನ್ನುವುದುರ ಕುರಿತು ಯಾವುದೇ ಮಾಹಿತಿಯು ಲಭ್ಯವಾಗಿಲ್ಲ. ಮೂಲಗಳ ಪ್ರಕಾರ ದನವೊಂದು ಅಡ್ಡ ಬಂದ ಪರಿಣಾವಾಗಿ ಅದರ ಕೋಡು ಎದೆಗೆ ತಾಗಿದ ಪರಿಣಾಮ ಈ ಸಾವು ಸಂಭವಿಸಿದೆ ಎನ್ಲಗಿದೆ. ಆದರೆ ಯಾವುದೆ ಸ್ಪಷ್ಟ ಮಾಹಿತಿಯು ದೊರೆತಿಲ್ಲ. ಜಾವಿದ್ ಬಾತಿನ್ ಭಟ್ಕಳದಿಂದ ಶಿರೂರು ಕಡೆಗೆ ಎಷ್ಟು ಗಂಟೆಗೆ ಹೋದರು ಮತ್ತು ಏತಕ್ಕಾಗಿ ಹೋದರು ಎನ್ನುವುದು ಸಹ ಯಾರಿಗೂ ತಿಳಿದಿಲ್ಲ. ಒಟ್ಟಿನಲ್ಲಿ ಇವರ ಅಪಘಾತ ಕುರಿತ ಯಾವುದೇ ಸ್ಪಷ್ಟವಾದ ಮಾಹಿತಿಯು ಮಾಧ್ಯಮಗಳಿಗೆ ಲಭಿಸುತ್ತಿಲ್ಲ. ಇವರು ಭಟ್ಕಳದ ತಂಝೀಮ್ ಹಾಗೂ ಅಂಜುಮನ್ ಸಂಸ್ಥೆಯು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಅತ್ಯಂತ ಸಕ್ರಿಯಾವಾಗಿ ಭಾಗವಹಿಸುತ್ತಿದ್ದರು. ಅಂಜುಮನ್ ಹಾಗೂ ತಂಝೀಮ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರೂ ಆಗಿದ್ದ ಇವರ ಅಗಲಿಕೆಯಿಂದ ಭಟ್ಕಳದ ಸಮಸ್ತ ನಾಗರೀಕರು ತುಂಬಲಾರದ ನಷ್ಟವನ್ನು ಅನುಭವಿಸುತ್ತಿದ್ದಾರೆ. ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರು ಯುವ ನ್ಯಾಯವಾದಿಯಾಗಿದ್ದರು. ಇವರು ಇಲ್ಲಿನ ಬಾತಿನ್ ಮಾಸ್ಟರ್ ಅವರು ಪುತ್ರರಾಗಿದ್ದಾರೆ.