ಪೋಸ್ಟ್‌ಗಳು

ಏಪ್ರಿಲ್ 3, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಉತ್ತರ ಕರ್ನಾಟದ ಸಂತ್ರಸ್ಥರಿಗೆ ನೆರವಿನ ಹಸ್ತ ಚಾಚಿದ ಭಟ್ಕಳದ ಮಜ್ಸಿಸ್-ಎ-ಇಸ್ಲಾಹ್-ವ-ತಂಝೀಮ್

ಇಮೇಜ್
ಉತ್ತರ ಕರ್ನಾಟದ ಸಂತ್ರಸ್ಥರಿಗೆ ನೆರವಿನ ಹಸ್ತ ಚಾಚಿದ ಭಟ್ಕಳದ ಮಜ್ಸಿಸ್-ಎ-ಇಸ್ಲಾಹ್-ವ-ತಂಝೀಮ್ ೧೯೧೨ ರಲ್ಲಿ ನಡೆದ ಬಲ್ಖಾನ್ ಯುದ್ದದಲ್ಲಿ ಉಂಟಾದ ಸಾವು ನೋವುಗಳ ಹಿನ್ನಲೆಯಲ್ಲಿ ಬಲ್ಖಾನ್ ರಿಲೀಫ್ ಕಮಿಟಿಯ ಹೆಸರಿನಲ್ಲಿ ಜನ್ಮತಾಳಿದ ಭಟ್ಕಳದ ಮಜ್ಲಿಸೆ-ಎ-ಇಸ್ಲಾಹ್-ವ-ತಂಝೀಮ್ ಅಂದಿನಿಂದ ಇಂದಿನವರೆಗೂ ಪ್ರಕೃತಿ ವಿಕೋಪಗಳೇ ಆಗಲಿ, ನೆರೆ ಹಾವಳಿಯಾಗಲಿ, ಗಲಭೆಗಳಿಂದ ಜನರು ಸಂತೃಸ್ತರಾಗಲಿ ಅಲ್ಲಿ ತಂಝೀಮ್ ನೀಯೋಗ ಸಹಾಯಕ್ಕಾಗಿ ಧಾವಿಸಿ ಬರುತ್ತದೆ. ಇತ್ತಿಚೆಗೆ ಉತ್ತರ ಕರ್ನಾಟಕದ ಸುಮಾರು ಎಂಟು ಜಿಲ್ಲೆಗಳಲ್ಲಿ ಉಂಟಾದ ನೆರೆಹಾವಳಿಯಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿದ್ದನ್ನು ಯಾರು ಕೂಡ ಮರೆಯುವಂತಿಲ್ಲ. ಭಟ್ಕಳದಿಂದ ದೂರದ ಬಾಗಲಕೋಟೆ ಬಿಜಾಪೂರ ಜಿಲ್ಲೆಗಳಲ್ಲಿ ಸಮೀಕ್ಷೆಯನ್ನು ಕೈಗೊಂಡ ತಂಝೀಮ್ ಅಲ್ಲಿನ ಸಂತೃಸ್ತರಿಗೆ ತನ್ನ ನೆರವಿನ ಹಸ್ತವನ್ನು ಚಾಚಿದೆ. ಭಟ್ಕಳದಂತ ಚಿಕ್ಕ ಊರಿನಲ್ಲಿರುವ ಈ ಜನರ ಹೃದಯ ಮಾತ್ರ ದೊಡ್ಡದು ಸಂತೃಸ್ತರ ದುರ್ಬಲರ, ಸಮಾಜದಲ್ಲಿ ನಿಕೃಷ್ಟರಾದವರ ಪರವಾಗಿ ಸದಾ ಮಿಡಿಯುವ ಇವರ ಹೃದಯವು ದೇಶದ ಯಾವುದೇ ಭಾಗದಲ್ಲಿ ಏನಾದರೂ ಆಗಲಿ ಅಲ್ಲಿ ಜಾತಿ,ಮತ ಬೇಧವೆನ್ನದೆ ಪರಿಹಾರ ಕಾರ್ಯವನ್ನು ಕೈಗೊಂಡು ಮಾನವೀಯತೆಯನ್ನು ಮೆರೆಯುವ ಈ ಜನ ನಿಜಕ್ಕೂ ನಮ್ಮ ರಾಜ್ಯಕ್ಕೆ ಮಾದರಿಯಾಗಬಲ್ಲರು. ಒಂದು ರೀತಿಯಲ್ಲಿ ಹೇಳಬೇಕಾದರೆ ತಂಝೀಮ್ ಹುಟ್ಟಿಕೊಂಡಿದ್ದೆ ಸಂತೃಸ್ತರಿಗೆ ಪರಿಹಾರವನ್ನು ನೀಡಲು, ಅವರ ದುಃಖದಲ್ಲಿ ಶಾಮೀಲಾಗಲು ಎಂದರೆ ತಪ್ಪ...