ಪೋಸ್ಟ್‌ಗಳು

ಏಪ್ರಿಲ್ 9, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ತೆಂಗಿನಗುಂಡಿ ಬಂದರಿಗೆ ರಾಜ್ಯ ಮೀನುಗಾರಿಕಾ ಸಚಿವ ಆನಂದ ಅಸ್ನೋಟಿಕರ್ ಭೇಟಿ

ಇಮೇಜ್
ಭಟ್ಕಳ:೯ , ತಾಲೂಕಿನ ಹೆಬಳೆ ಗ್ರಾ.ಪಂ.ವ್ಯಾಪ್ತಿಯ ತೆಂಗಿನಗುಂಡಿ ಬಂದರಿಗೆ ಗುರುವಾರ ಸಂಜೆ ರಾಜ್ಯ ಮೀನುಗಾರಿಕಾ ಸಚಿವ ಆನಂದ ಅಸ್ನೋಟಿಕರ್ ಭೇಟಿ ನೀಡಿದ್ದು ಅಲ್ಲಿ ಶಿಥಿಲಗೊಂಡು ಕುಸಿಯು ಹಂತಕ್ಕೆ ತಲುಪಿರುವ ಮೀನು ಹರಾಜು ಕೇಂದ್ರ ಹಾಗೂ ಕುಸಿದಿರುವ ಜಟ್ಟಿಯನ್ನು ವೀಕ್ಷಿಸಿದರು. ನಂತರ ಅಧಿಕಾರಿಗಳೊಂದಿಗೆ ಇದನ್ನು ಮಳೆಗಾಲ ಆರಂಭವಾಗುವ ಪೂರ್ವದಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮೀನುಗಾರರ ಮುಖಂಡರು ಕಳೆದ ಹಲವು ವರ್ಷಗಳಿಂದ ತೆಂಗಿನಗುಂಡಿ ಬಂದರಿನಲ್ಲಿ ಬ್ರೇಕ್ ವಾಟರ್ ನಿರ್ಮಾಣ , ಹಾಳಾಗಿರುವ ಜಟ್ಟಿ ಹಾಗೂ ಶಿಥಿಲಗೊಂಡಿರುವ ಮೀನು ಹರಾಜು ಕೇಂದ್ರ ರಿಪೇರಿಯ ಕುರಿತು ಒತ್ತಾಯಿಸುತ್ತಲೇ ಬಂದಿದ್ದೇವೆ. ಕಳೆದ ವರ್ಷ ಮೀನು ಹರಾಜು ಕೇಂದ್ರಕ್ಕೆ ಮೇಲ್ಚಾವಣಿ ರಿಪೇರಿ ಮಾತ್ರ ಕೈಗೊಳ್ಳಲಾಗಿದ್ದು , ತಗಡು ಶೀಟ್‌ಗಳು ಗಾಳಿಗೆ ಹಾರಿ ಹೋಗಿದೆ. ಅಳಿವೆ ಪ್ರದೇಶದಲ್ಲಿ ವ್ಯಾಪಕವಾಗಿ ಹೂಳು ತುಂಬಿದ್ದರಿಂದ ಪ್ರತಿವರ್ಷ ಬೋಟುಗಳು ಮುಳುಗಿ ಹಾನಿಯಾಗುತ್ತಲೇ ಇದೆ. ಇದರಿಂದ ಜೀವಹಾನಿಯೂ ಉಂಟಾದ ಉದಾಹರಣೆ ಇದೆ. ಹೂಳು ತುಂಬಿದ್ದರಿಂದ ಬಂದರಿಗೆ ಬರುವ ಬೋಟುಗಳ ಸಂಖ್ಯೆ ಕಡಿಮೆಯಾಗಿದ್ದು , ಬ್ರೇಕ್ ವಾಟರ್ ನಿರ್ಮಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಯಾವ ಬೋಟುಗಳು ತೆಂಗಿನಗುಂಡಿಗೆ ಬರದ ಪರಿಸ್ಥಿತಿ ಉಂಟಾಗುತ್ತದೆ ಎಂದರು. ಮೀನುಗಾರರ ಸಮಸ್ಯೆಗಳನ್ನು ಕೇಳಿದ ಸಚಿವ ಆನಂದ ಆಸ್ನೋಟಿಕರ್ ಬಂದರಿನಲ್ಲ...

ಶ್ರೀ ನಾಗಯಕ್ಷೆ ಮಹಾಸತಿ ಧರ್ಮದೇವಿ ಸಂಸ್ಥಾನದ ಆರನೇ ವರ್ಧಂತಿ ಉತ್ಸವ

ಇಮೇಜ್
ಭಟ್ಕಳ:೯ ಇಲ್ಲಿನ ಶ್ರೀ ನಾಗಯಕ್ಷೆ ಮಹಾಸತಿ ಧರ್ಮದೇವಿ ಸಂಸ್ಥಾನದ ಆರನೇ ವರ್ಧಂತಿ ಉತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ವಿಜ್ರಂಭಣೆಯಿಂದ ನೆರವೇರಿತು. ದೇವಸ್ಥಾನದಲ್ಲಿ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೇವಾ ವಾಹಿನಿ ಅಧ್ಯಕ್ಷ ಸುರೇಂದ್ರ ಶ್ಯಾನುಭಾಗ್ ಮಕ್ಕಳಿಗೆ ಸಣ್ಣವರಿರುವಾಗಲೇ ಧಾರ್ಮಿಕ ಜಾಗ್ರತೆಯನ್ನು ಮೂಡಿಸಲು ಪಾಲಕರು ಮುಂದಾಗಬೇಕು. ನಮ್ಮ ಆಚಾರ ವಿಚಾರ , ಸಂಸ್ಕೃತಿಯ ಬಗ್ಗೆ ಮಕ್ಕಳು ತಿಳಿದುಕೊಂಡರೆ ದೊಡ್ಡವರಾದ ಮೇಲೆ ಅದೇ ಉತ್ತಮ ಸಂಸ್ಕೃತಿಯನ್ನು ಹೊಂದಲು ಸಾಧ್ಯ. ಯುವ ಜನಾಂಗಕ್ಕೆ ಭಕ್ತಿಯ ಪ್ರೇರಣೆಯಾಗಬೇಕು. ದೇವಸ್ಥಾನದ ವತಿಯಿಂದ ಅನೇಕ ಸಾಮಾಜಿಕ , ಧಾರ್ಮಿಕ ಕಾರ್ಯಗಳು ನಡೆಯುತ್ತಿದ್ದು , ಇನ್ನೂ ಹೆಚ್ಚು ಕಾರ್ಯಗಳಾಗುವಂತಾಗಲಿ ಎಂದರು. ದೇವಸ್ಥಾನದಲ್ಲಿ ನೂತನವಾಗಿ ಅಳವಡಿಸಲಾದ ಎಲ್.ಸಿ.ಡಿ.ಟಿ.ವಿ. ಹಾಗೂ ಶ್ರೀ ದೇವರ ಪೂಜಾ ಕಾರ್ಯಕ್ರಮದ ನೇರ ಪ್ರಸಾರವನ್ನು ಮಂಗಳೂರಿನ ಉಷಾ ಸುರೇಶ ರಾವ್ ಉದ್ಘಾಟಿಸಿದರು. ಉಪಾಧ್ಯಕ್ಷ ವೆಂಕಟೇಶ ಪ್ರಭು ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಆಡಳಿತ ಮಂಡಳಿ ನಡೆಸಿದ ಕಾರ್ಯಗಳನ್ನು ವಿವರಿಸಿ ಇನ್ನೂ ಹೆಚ್ಚಿನ ಕಾರ್ಯಗಳಾಗಬೇಕು ಎಂದು ಆಶಿಸಿದರು. ವೇದಿಕೆಯಲ್ಲಿ ನಾರಾಯಣ ಗವಾಳಿ , ನ್ಯಾಯವಾದಿ ಆರ್.ಆರ್. ಶ್ರೇಷ್ಟಿ ಹಾಗೂ ಮುಂಬೈಯ ಮಾಧವಿ ಕಾಮತ್ ಮಾತನಾಡಿದರು. ದೇವಸ್ಥಾನದ ಅಧ್ಯಕ್ಷ ರಾಮದಾಸ ಪ್ರಭು ಪ್ರಾಸ್ತಾವಿಕವಾಗಿ ಮಾತನ...

ಶ್ರೀರಾಮಚಂದ್ರಾಪುರ ಮಠದ ಶ್ರೀಗಳಿಂದ ಹವ್ಯಕ ಸಭಾಭವನದ ಉದ್ಘಾಟನೆ

ಇಮೇಜ್
ಭಟ್ಕಳ: ೯ , ನಾನು ಎನ್ನುವುದು ಸರಿಯಲ್ಲ ನಾವು ಎಂಬ ಭಾವನೆಯೊಂದಿಗೆ ಜೀವಿಸಬೇಕು ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಶ್ರೀಗಳು ಅಭಿಪ್ರಯಾ ಪಟ್ಟರು. ಅವರು ಮುರ್ಡೇಶ್ವರದ ಬಸ್ತಿಮಕ್ಕಿಯ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ರಾಘವೇಶ್ವರ ಭಾರತೀ ಹವ್ಯಕ ಸಭಾ ಭವನವನ್ನು ಉದ್ಘಾಟಿಸಿ ಆಶೀರ್ವಚನ ನೀಡುತ್ತಿದ್ದರು. ತನ್ನ ತನದ ಭಾವನೆಗೆ ಯಾವುದೇ ಬೆಲೆಕಟ್ಟಲಾಗದು. ಭಟ್ಕಳ ಸೀಮಾ ಪರಿಷತ್‌ನವರು ಐಕ್ಯತೆಯಿಂದ ಸಭಾಭವನವನ್ನು ನಿರ್ಮಿಸಿದ್ದಾರೆ. ಇಲ್ಲಿ ಸದಾ ಕಾರ್ಯಕ್ರಮಗಳು ನಡೆದು ಜನರಿಗೆ ಉಪಯೋಗವಾಗಲಿ ಎಂದು ಹಾರೈಸಿದರು. ಮುಖ್ಯ ಅತಿಥಿಯಾಗಿದ್ದ ಶಾಸಕ ಜೆ.ಡಿ. ನಾಯ್ಕ ಪ್ರತಿಯೊಂದು ಸಮಾಜದ ಕುರಿತು ತಮಗೆ ಉತ್ತಮ ಅಭಿಪ್ರಾಯವಿದೆ. ಹವ್ಯಕ ಸಮಾಜದ ಕುರಿತು ವಿಶೇಷ ಅಭಿಮಾನವಿದೆ. ಶಾಸಕನಾದ ಮೇಲೆ ಸಮಾಜದ ಎಲ್ಲಾ ಸಮಸ್ಯೆಗಳನ್ನು ನಿವಾರಣೆ ಮಾಡುವುದು ಅಸಾಧ್ಯ. ಆದರೂ ತಾನು ಸಮಾಜದ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ ಎಂದರು. ಜಿಪಂ ಸದಸ್ಯ ಮಂಕಾಳ ವೈದ್ಯ ಕೇಂದ್ರ ಪರಿಷತ್ತಿನ ಆರ್.ಎಸ್.ಹೆಗಡೆ ಹರಿಗೆ , ಮಾಜಿ ಸಚಿವ ಡಾ. ಎಂ.ಪಿ.ಕರ್ಕಿ ಹವ್ಯಕ ಮಂಡಲದ ಅಧ್ಯಕ್ಷ ಜಿ.ಜಿ. ಭಟ್ಟ ಉಪಸ್ಥಿತರಿದ್ದರು. ಆರಂಭದಲ್ಲಿ ಶಂಖನಾದ , ವೇ.ಮೂ. ರವಿ ಭಟ್ಟ ಬಲ್ಸೆ ಹಾಗೂ ವೇ.ಮೂ. ವಿಶ್ವನಾಥ ಭಟ್ಟ ಇವರಿಂದ ವೇದಘೋಷ , ಜಿತೇಂದ್ರ ಸಂಗಡಿಗರಿಂದ ಪ್ರಾರ್ಥನೆ , ಹವ್ಯಕ ವಲಯದ ಅಧ್ಯಕ...