ಪೋಸ್ಟ್‌ಗಳು

ಮಾರ್ಚ್ 5, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಭಟ್ಕಳ ಪುರಸಭೆ ಚುನಾವಣೆ ರಾಜ್ಯಕ್ಕೆ ಮಾದರಿ; ೨೩ರಲ್ಲಿ ೧೩ವಾರ್ಡುಗಳಿಗೆ ಅವಿರೋಧ ಆಯ್ಕೆ

ಭಟ್ಕಳ ಪುರಸಭೆ ಚುನಾವಣೆ ರಾಜ್ಯಕ್ಕೆ ಮಾದರಿ; ೨೩ರಲ್ಲಿ ೧೩ವಾರ್ಡುಗಳಿಗೆ ಅವಿರೋಧ ಆಯ್ಕೆ ಮೊಹಲ್ಲಾದ ಮಸೀದಿ ಕಮಿಟಿಗಳೇ ಇಲ್ಲಿ ಹೈಕಮಾಂಡ್ *ಮುಹಮ್ಮದ್ ರಝಾ ಮಾನ್ವಿ ಚುನಾವಣೆಯಲ್ಲಿ ಮರಾಮಾರಿ, ಟಿಕೆಟಿಗಾಗಿ ಪೈಪೋಟಿ ಇದ್ದದ್ದೇ. ಇದೇ ಸುದ್ದಿಗಳು ಚುನಾವಣೆ ಮುಗಿಯುವವರೆಗೂ ಪತ್ರಿಕೆಗಳಲ್ಲಿ ರಾರಾಜಿಸುತ್ತಿರುತ್ತವೆ. ಆದರೆ ಹೊಡೆದಾಟ ಬಡಿದಾಟದ ಸುದ್ದಿಗಳು ಎಲ್ಲೂ ಕಾಣ ಸಿಗುವುದಿಲ್ಲ.  ಈಗ ಮತ್ತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಂದಿದೆ. ಇಲ್ಲಿಯೂ ಜನರು ತಮ್ಮ ತಮ್ಮ ಪಕ್ಷದ ಬ್ಯಾನರ್ ನಡಿ ತಮ್ಮದೆ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂಬ ಹರಸಹಾಸಕ್ಕಿಳಿದ್ದಿದ್ದಾರೆ. ಎಲ್ಲೋ ಒಂದೆರೆಡು ಕಡೆ ಅಭ್ಯರ್ಥಿಗಳ ಕೊರತೆಯಿಂದಲೂ ಅಥವಾ ಆ ವಾರ್ಡಿನ ವ್ಯಕ್ತಿಯ ವರ್ಚಸ್ಸಿನಿಂದಲೂ ಅವಿರೋಧ ಆಯ್ಕೆಗಳು ನಡೆಯುತ್ತವೆ. ಆದರೆ ಯೋಜಿತ ಮತ್ತು ಕ್ರಮಬದ್ಧ ರೀತಿಯಲ್ಲಿ ಆ ವಾರ್ಡಿನ ಜನತೆ ಮುಂದೆ ನಿಂತು ತಮ್ಮ ಒಮ್ಮತ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬಹಳ ವಿರಳ ಮತ್ತು ಅಪರೂಪ.  ಪಂಚಾಯತ್, ಹಾಗೂ ಪುರಸಭೆ ಚುನಾವಣೆಗಳಲ್ಲಿ ಲಕ್ಷಾಂತರ ಹಣ ಖರ್ಚು ಮಾಡಿ ಗೆಲುವು ಸಾಧಿಸಿ ತಮ್ಮ ಅಧಿಕಾರವಧಿಯಲ್ಲ ಆ ಹಣವನ್ನು ಮರುಪೂರಣಗೊಳಿಸಲು ಹೆಣಗಾಡುತ್ತಿರುವ ಎಷ್ಟೋ ಮಂದಿ ಜನಪ್ರತಿನಿಧಿಗಳು ನಾವು ಕಂಡಿಲ್ಲ? ಯಾವುದೇ ಆಯ್ಕೆಗೊಂಡ ವ್ಯಕ್ತಿ ಸಾಮಾಜಿಕ ತುಡಿತ ಹಾಗೂ ಕಳಕಳಿಯಿಮದ ತನ್ನ ವಾರ್ಡಿನ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದಾನೆ? ಅಥವಾ ಆ ವ್ಯಕ್ತಿಯ ಕೊ...