ಇಂಜಿನೀಯರಿಂಗ್ ವಿದ್ಯಾರ್ಥಿಯ ಉರಗಪ್ರೇಮ
ಇಂಜಿನೀಯರಿಂಗ್ ವಿದ್ಯಾರ್ಥಿಯ ಉರಗಪ್ರೇಮ ೨೦೦ಕ್ಕೂ ಹೆಚ್ಚು ಹೆಬ್ಬಾವುಗಳ ಸಂರಕ್ಷಕ ಮಿಸ್ಬಾ-ಉಲ್-ಹಖ್ * ಮುಹಮ್ಮದ್ ರಝಾ ಮಾನ್ವಿ ಹಾವುಗಳೆಂದರೆ ಎಲ್ಲರಿಗೂ ಭಯ.ಅದರಲ್ಲೂ ಹೆಬ್ಬಾವು ಕಂಡರೆ ಹೆದರಿಕೆ ಹುಟ್ಟಿಕೊಳ್ಳುತ್ತದೆ. ಇಂತಹದ್ದರಲ್ಲಿ ಸುಮಾರು ೨೦೦ಕ್ಕೂ ಹೆಚ್ಚು ಸರ್ಪ ಹಾಗೂ ಹೆಬ್ಬಾವುಗಳನ್ನು ಹಿಡಿದು ಅವುಗಳನ್ನು ಸಂರಕ್ಷಿಸಿದ ಕೀರ್ತಿ ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ಕಾಲೇಜಿನ ಸಿವಿಲ್ ಇಂಜಿನೀಯರ್ ವಿಭಾಗದ ೨೨ವರ್ಷದ ವಿದ್ಯಾರ್ಥಿ ಮಿಸ್ಬಾ-ಉಲ್-ಹಖ್ ಗೆ ಸಲ್ಲುತ್ತದೆ. ಈತ ತನ್ನ ೧೧ನೇ ವರ್ಷದ ವಯೋಮಾನದಲ್ಲೆ ಹಾವುಗಳನ್ನು ಹಿಡಿಯು ಕಲೆಯನ್ನು ರೂಢಿಸಿಕೊಂಡಿರುವುದಾಗಿ ಹೇಳುತ್ತಾನೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಇಲ್ಲಿನ ಶಮ್ಸ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ನೌನಿಹಾಲ್ ಶಾಲೆಗಳಲ್ಲಿ ಪಡೆದ ಈತ ಓದಿನಲ್ಲೂ ಮುಂಚೂಣಿಯ ವಿದ್ಯಾರ್ಥಿ, ಈಗ ಸಿವಿಲ್ ಇಂಜಿನೀಯರಿಂಗ್ ಓದುತ್ತಿರುವ ಈತ ಭಟ್ಕಳದ ಯಾವ ಮೂಲೆಯಲ್ಲೂ ಹಾವು ಕಂಡರೆ ಸಾಕು ಅದನ್ನು ಸುರಕ್ಷತವಾಗಿ ಹಿಡಿದು ಅರಣ್ಯ ಇಲಾಖೆಯ ಸುಪರ್ಧಿಗೆ ಒಪ್ಪಿಸುತ್ತಾನೆ. ಹಾವುಗಳನ್ನು ಕಂಡರೆ ಹಿಡಿ, ಕೊಲ್ಲು ಎನ್ನುವ ಜನರ ಮಧ್ಯೆ ಇಂತಹ ಉರಗಪ್ರೇಮಿಯೊಬ್ಬ ತನ್ನ ಮಾನವೀಯ ಸ್ಪರ್ಷದೊಂದಿಗೆ ಅವುಗಳಿಗೆ ಮರುಜೀವ ನೀಡುತ್ತಾನೆ. ಉತ್ತರಕನ್ನಡ ಜಿಲ್ಲೆಯು ಶೇ೮೦ರಷ್ಟು ಅರಣ್ಯ ಪ್ರದೇಶ ಹೊಂದಿದ್ದು ಅದರ...