ಪೋಸ್ಟ್‌ಗಳು

ಮಾರ್ಚ್ 26, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಇಂಜಿನೀಯರಿಂಗ್ ವಿದ್ಯಾರ್ಥಿಯ ಉರಗಪ್ರೇಮ

ಇಮೇಜ್
ಇಂಜಿನೀಯರಿಂಗ್ ವಿದ್ಯಾರ್ಥಿಯ ಉರಗಪ್ರೇಮ  ೨೦೦ಕ್ಕೂ ಹೆಚ್ಚು ಹೆಬ್ಬಾವುಗಳ ಸಂರಕ್ಷಕ ಮಿಸ್ಬಾ-ಉಲ್-ಹಖ್ * ಮುಹಮ್ಮದ್ ರಝಾ ಮಾನ್ವಿ ಹಾವುಗಳೆಂದರೆ ಎಲ್ಲರಿಗೂ ಭಯ.ಅದರಲ್ಲೂ ಹೆಬ್ಬಾವು ಕಂಡರೆ ಹೆದರಿಕೆ ಹುಟ್ಟಿಕೊಳ್ಳುತ್ತದೆ. ಇಂತಹದ್ದರಲ್ಲಿ ಸುಮಾರು ೨೦೦ಕ್ಕೂ ಹೆಚ್ಚು ಸರ್ಪ ಹಾಗೂ ಹೆಬ್ಬಾವುಗಳನ್ನು ಹಿಡಿದು ಅವುಗಳನ್ನು ಸಂರಕ್ಷಿಸಿದ ಕೀರ್ತಿ ಭಟ್ಕಳದ ಅಂಜುಮನ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ಕಾಲೇಜಿನ ಸಿವಿಲ್ ಇಂಜಿನೀಯರ್ ವಿಭಾಗದ ೨೨ವರ್ಷದ ವಿದ್ಯಾರ್ಥಿ ಮಿಸ್ಬಾ-ಉಲ್-ಹಖ್ ಗೆ ಸಲ್ಲುತ್ತದೆ.  ಈತ ತನ್ನ ೧೧ನೇ ವರ್ಷದ ವಯೋಮಾನದಲ್ಲೆ ಹಾವುಗಳನ್ನು ಹಿಡಿಯು ಕಲೆಯನ್ನು ರೂಢಿಸಿಕೊಂಡಿರುವುದಾಗಿ ಹೇಳುತ್ತಾನೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಇಲ್ಲಿನ ಶಮ್ಸ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ನೌನಿಹಾಲ್ ಶಾಲೆಗಳಲ್ಲಿ ಪಡೆದ ಈತ ಓದಿನಲ್ಲೂ ಮುಂಚೂಣಿಯ ವಿದ್ಯಾರ್ಥಿ, ಈಗ ಸಿವಿಲ್ ಇಂಜಿನೀಯರಿಂಗ್ ಓದುತ್ತಿರುವ ಈತ ಭಟ್ಕಳದ ಯಾವ ಮೂಲೆಯಲ್ಲೂ ಹಾವು ಕಂಡರೆ ಸಾಕು ಅದನ್ನು ಸುರಕ್ಷತವಾಗಿ ಹಿಡಿದು ಅರಣ್ಯ ಇಲಾಖೆಯ ಸುಪರ್ಧಿಗೆ ಒಪ್ಪಿಸುತ್ತಾನೆ. ಹಾವುಗಳನ್ನು ಕಂಡರೆ ಹಿಡಿ, ಕೊಲ್ಲು ಎನ್ನುವ ಜನರ ಮಧ್ಯೆ ಇಂತಹ ಉರಗಪ್ರೇಮಿಯೊಬ್ಬ ತನ್ನ ಮಾನವೀಯ ಸ್ಪರ್ಷದೊಂದಿಗೆ ಅವುಗಳಿಗೆ ಮರುಜೀವ ನೀಡುತ್ತಾನೆ.  ಉತ್ತರಕನ್ನಡ ಜಿಲ್ಲೆಯು ಶೇ೮೦ರಷ್ಟು ಅರಣ್ಯ ಪ್ರದೇಶ ಹೊಂದಿದ್ದು ಅದರ...

ಸ್ಟೀಲ್ ಪಾತ್ರೆಗಳ ಭರಾಟೆಯಲ್ಲಿ ಮರೆಯಾಗುತ್ತಿರುವ ಮಣ್ಣಿನ ಮಡಕೆ

ಇಮೇಜ್
ಸ್ಟೀಲ್ ಪಾತ್ರೆಗಳ ಭರಾಟೆಯಲ್ಲಿ ಮರೆಯಾಗುತ್ತಿರುವ ಮಣ್ಣಿನ ಮಡಕೆ;  ಕುಂಬಾರಣ್ಣ ಈಗ ನೆನಪು ಮಾತ್ರ *ಮುಹಮ್ಮದ್ ರಝಾ ಮಾನ್ವಿ ಹೌದು ಇದು ಪ್ಲಾಸ್ಟಿಕ್ ಯುಗ. ನಮ್ಮ ಮನೆಯ ಪ್ರತಿಯೊಂದು ಸ್ಥಳವನ್ನು ಪ್ಲಾಸ್ಟಿಕ್ ಕಬಳಿಸಿಕೊಂಡಿದೆ. ನಾವು ಚಿಕ್ಕವರಿದ್ದಾಗ ಕುಂಬಾರ ಓಣಿಗೆ ಹೋಗಿ ಬೇಳೆ ಬೇಯಿಸುವ ಮಡಕೆ ತರವುದೆ ಒಂದು ಸಾಹಸ. ಅದನ್ನು ಜೋಪಾನವಾಗಿ ಮನೆಮುಟ್ಟಿಸುವುದರೊಳಗೆ ಸಾಕುಸಾಕಾಗಿ ಹೋಗುತ್ತಿತ್ತು. ಈಗ ಅಂತಹ ಪ್ರಮೇಯವೇ ಇಲ್ಲ. ಏಕೆಂದರೆ ಮಡಕೆಯ ಬದಲಿಗೆ ಲೋಹದ ವಸ್ತುಗಳು ಅಡುಗೆ ಮನೆ ಸೇರಿಕೊಂಡಿವೆ. ಅಲಂಕಾರಿಕ ಮಣ್ಣಿನ ಪರಿಕರಕಗಳ ಬದಲಾಗಿ ಆರ್ಟಿಫಿಸಿಯಲ್ ಪ್ಲಾಸ್ಟಿಕ್ ವಸ್ತುಗಳು ತಮ್ಮ ಜಾಗವನ್ನು ಪಡೆದುಕೊಂಡಿವೆ.  ಮುಂಜಾನೆದ್ದು ಕುಂಬಾರಣ್ಣ ಹಾಲುಬಾನುಂಡಾನ ಹಾರ್‍ಯಾರಿ ಮಣ್ಣಾ ತುಳಿದಾನ ಹಾರಿ ಹಾರ್‍ಯಾಡಿ ಮಣ್ಣಾ ತುಳಿಯುತ್ತ ಮಾಡ್ಯಾನ ನಾರ್‍ಯಾರು ಹೊರುವಂತ ಐರಾಣಿ ಹೊತ್ತಾರೆದ್ದು ಕುಂಬಾರಣ್ಣ ತುಪ್ಪಾಬಾನುಂಡಾನ ಘಟ್ಟಿಸಿ ಮಣ್ಣಾ ತುಳಿದಾನ ಘಟ್ಟೀಸಿ ಮಣ್ಣಾ ತುಳಿಯುತ್ತ ಮಾಡ್ಯಾನ ಮಿತ್ರೇರು ಹೊರುವಂತ ಐರಾಣಿ ಈ ಜಾನಪದ ಹಾಡಿನ ಕುಂಬಾರಣ್ಣ ಈಗ ನೆನಪು ಮಾತ್ರ. ಕುಂಬಾರಣ್ಣನೀಗ ಮುಂಜಾನೆದ್ದು ಹಾಲು ಬಾನು ಉಂಡು,ಹಾರ್‍ಯಾಡಿ ಮಣ್ಣನ್ನು ತುಳಿಯುವಂತಹ ಪರಿಸ್ಥಿತಿಯಲ್ಲಿ ಇಲ್ಲ. ಏಕೆಂದರೆ ಆಧುನಿಕತೆಯ ಭರಾಟೆಯಲ್ಲಿ ಜನರು ಕುಂಬಾರಣ್ಣ ಮಾಡಿದ ಮಣ್ಣಿನ ಮಡಿಕೆಗಳನ್ನು ಕೊಳ್ಳಲು ಸಿದ್ದರಿಲ್ಲ. ಅಲ್ಲಲ್ಲ...